ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Cross references
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.