ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.