ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
Cross references
ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.