ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
Cross references
ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.