ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
Cross references
ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು,
ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?