ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Cross references
ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?