ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
Cross references
ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.