ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
Cross references
ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.