ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
Cross references
ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ