ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
Cross references
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.