ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
Cross references
ಕರ್ತನು ಮೋಶೆಯ ಸಂಗಡ ಮಾತನಾಡಿ
ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.