ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
Cross references
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;