ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Cross references
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.