ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.