ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
Cross references
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.