ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
Cross references
ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.