ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
Cross references
ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.