ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Cross references
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.