ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
Cross references
ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.