ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
Cross references
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.