ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
Cross references
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ಕರ್ತನು ನನ್ನ ಕುರುಬನು; ಕೊರತೆಪಡೆನು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.