ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
Cross references
ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು