ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
Cross references
ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ