Home Bibles ಸಭಾಪ್ರಸಂಗಿ 2:21 · ಕನ್ನಡ ಬೈಬಲ್
ಸಭಾಪ್ರಸಂಗಿ 2:21 · ಕನ್ನಡ ಬೈಬಲ್

ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.

Cross references

2 ದಿನವೃತ್ತಾಂತ 31:20

ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

2 ದಿನವೃತ್ತಾಂತ 33:2

ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

2 ದಿನವೃತ್ತಾಂತ 34:2

ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.

2 ದಿನವೃತ್ತಾಂತ 35:18

ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.

2 ದಿನವೃತ್ತಾಂತ 36:5

ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.

ಕೀರ್ತನೆಗಳು 39:7

ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.

ಕೀರ್ತನೆಗಳು 49:11

ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.

ಸಭಾಪ್ರಸಂಗಿ 2:17

ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.

ಸಭಾಪ್ರಸಂಗಿ 9:18

ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.

ಯೆರೆಮಿಯ 22:15

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

ಯೆರೆಮಿಯ 22:17

ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

Interlinear

Choose Theme