ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
Cross references
ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.