ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
Cross references
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ