ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
Cross references
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.