ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
Cross references
ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.