ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
Cross references
ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!