Home Bibles ಸಭಾಪ್ರಸಂಗಿ 3:14 · ಕನ್ನಡ ಬೈಬಲ್
ಸಭಾಪ್ರಸಂಗಿ 3:14 · ಕನ್ನಡ ಬೈಬಲ್

ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.

Cross references

ದ್ವಿತೀಯೋಪದೇಶಕಾಂಡ 32:4

ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

2 ಸಮುವೇಲ 22:31

ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.

ಕೀರ್ತನೆಗಳು 33:11

ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.

ಕೀರ್ತನೆಗಳು 64:9

ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.

ಕೀರ್ತನೆಗಳು 76:10

ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

ಕೀರ್ತನೆಗಳು 119:90

ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.

ಸಾಮೇತಿಗಳು 19:21

ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಸಾಮೇತಿಗಳು 30:6

ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.

ಸಭಾಪ್ರಸಂಗಿ 5:6

ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?

ಸಭಾಪ್ರಸಂಗಿ 5:7

ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.

ಸಭಾಪ್ರಸಂಗಿ 7:18

ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.

ಸಭಾಪ್ರಸಂಗಿ 8:12

ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

ಸಭಾಪ್ರಸಂಗಿ 12:13

ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

ಯೆಶಾಯ 10:12

ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

ಯೆಶಾಯ 46:10

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ಯೆಶಾಯ 59:18

ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.

ದಾನಿಯೇಲ 4:34

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ದಾನಿಯೇಲ 8:8

ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.

ದಾನಿಯೇಲ 11:2

ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

ಯೋಹಾನ 19:10

ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.

ಯೋಹಾನ 19:28

ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ಅಪೋಸ್ತಲರ ಕೃತ್ಯಗಳು 5:39

ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

ರೋಮಾಪುರದವರಿಗೆ 11:36

ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್‌.

ಎಫೆಸದವರಿಗೆ 3:11

ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.

ತೀತ 1:2

ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

ಯಾಕೋಬ 1:17

ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

ಪ್ರಕಟನೆ 15:4

ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

Interlinear

Choose Theme