ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.