ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
Cross references
ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.