ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
Cross references
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.