ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
Cross references
ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,
ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.