ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
Cross references
ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.