ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
Cross references
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.