ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.
ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.