Home Bibles ಸಭಾಪ್ರಸಂಗಿ 6:9 · ಕನ್ನಡ ಬೈಬಲ್
ಸಭಾಪ್ರಸಂಗಿ 6:9 · ಕನ್ನಡ ಬೈಬಲ್

ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

Cross references

ಯೋಬ 31:7

ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,

ಸಾಮೇತಿಗಳು 30:15

ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.

ಸಭಾಪ್ರಸಂಗಿ 1:2

ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.

ಸಭಾಪ್ರಸಂಗಿ 1:14

ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.

ಸಭಾಪ್ರಸಂಗಿ 1:17

ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

ಸಭಾಪ್ರಸಂಗಿ 2:11

ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.

ಸಭಾಪ್ರಸಂಗಿ 2:22

ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?

ಸಭಾಪ್ರಸಂಗಿ 3:12

ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.

ಸಭಾಪ್ರಸಂಗಿ 4:4

ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

ಸಭಾಪ್ರಸಂಗಿ 5:18

ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.

ಸಭಾಪ್ರಸಂಗಿ 6:2

ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

ಯೆರೆಮಿಯ 2:20

ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

Interlinear

Choose Theme