ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Cross references
ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.