ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
Cross references
ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.