ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
Cross references
ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.