ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
Cross references
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.