ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
Cross references
ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.