Home Bibles ಸಭಾಪ್ರಸಂಗಿ 7:8 · ಕನ್ನಡ ಬೈಬಲ್
ಸಭಾಪ್ರಸಂಗಿ 7:8 · ಕನ್ನಡ ಬೈಬಲ್

ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.

Cross references

ಕೀರ್ತನೆಗಳು 126:5

ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.

ಸಾಮೇತಿಗಳು 13:10

ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.

ಸಾಮೇತಿಗಳು 14:29

ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.

ಸಾಮೇತಿಗಳು 15:18

ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

ಸಾಮೇತಿಗಳು 16:32

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.

ಸಾಮೇತಿಗಳು 28:25

ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.

ಯೆಶಾಯ 10:24

ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಯೆಶಾಯ 10:28

ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.

ಲೂಕ 16:25

ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

ಲೂಕ 21:19

ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಎಫೆಸದವರಿಗೆ 4:2

ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

ಹೆಬ್ರಿಯರಿಗೆ 10:36

ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಯಾಕೋಬ 5:8

ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

ಯಾಕೋಬ 5:11

ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

1 ಪೇತ್ರ 1:13

ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

1 ಪೇತ್ರ 2:20

ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme