ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
Cross references
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.