ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
Cross references
ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.