ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
Cross references
ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.