ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
Cross references
ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.