ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
Cross references
ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ