ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Cross references
ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.